ಕಲಬುರಗಿ: ಕೋಲಿ, ಕಬ್ಬಲಿಗ ಸಮಾಜವನ್ನು ಎಸ್‌ಟಿಗೆ ಸೇರಿಸಲು ಆಗ್ರಹ; ಬೃಹತ್ ಪ್ರತಿಭಟನೆ

ಕಲಬುರಗಿ: ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜಗಳನ್ನು ಪರಿಶಿಷ್ಟ ಪಂಗಡ (ಎಸ್ಟಿ) ಪಟ್ಟಿಗೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ, ಸಮುದಾಯದ ಸಹಸ್ರಾರು ಜನರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿದ ಬಳಿಕ ಕೋಲಿ, ಕಬ್ಬಲಿಗ ಸಮಾಜಗಳ ಪ್ರಮುಖ ಮುಖಂಡರುಗಳ ನೇತೃತ್ವದಲ್ಲಿ ಹಾವೇರಿಯ ಶಾಂತಬಿಷ್ಮ ಚೌಡಯ್ಯ ಸ್ವಾಮೀಜಿ ಅವರು ಧ್ವಜ ತೋರಿಸುವುದರ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು.
ಜಗತ್ ವೃತ್ತದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತನಕ ನಡೆಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಪರ್ಯಾಯ ಪದಗಳಾದ ಕೋಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ 1996ರಿಂದ ಒತ್ತಾಯಿಸುತ್ತಾ ಬಂದಿದ್ದೇವೆ, ಹಲವು ಬಾರಿ ಗಂಗಾಮತ ಮತ್ತು ಅದರ ಉಪಜಾತಿಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಿದ್ದರೂ ಪದೇ ಪದೇ ವಾಪಸ್ ಕಳುಹಿಸಲಾಗುತ್ತಿದೆ, ಹಾಗಾಗಿ ಈ ಬಾರಿ ಸೂಕ್ತ ದಾಖಲೆಗಳೊಂದಿಗೆ ರಾಜ್ಯ ಸರ್ಕಾರ ಮತ್ತೆ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿದರು.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *