ಹೊಸ ವರ್ಷಾಚರಣೆಯ ಹಿನ್ನೆಲೆ ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಒತ್ತು 

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ನೀಡಿದ ಸೂಚನೆಗಳು;

• ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

• ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.

• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ.

• ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು.

• ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. • ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.

  • Related Posts

    ಮಾರ್ಟಳ್ಳಿ: ಅರಣ್ಯ ಅಂಚಿನ ಗ್ರಾಮದಲ್ಲಿ ನೀರಿನ ಹಾಹಾಕಾರ; ಟ್ಯಾಂಕರ್ ನೀರಿಗಾಗಿ ಶಾಲಾ ಮಕ್ಕಳ ಹಕ್ಕೊತ್ತಾಯ

    ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಟು ಕೊವಿಲ್ ಭಾಗದ ನಿವಾಸಿಗಳು ಭೀಕರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಮತ್ತು ಜಾನುವಾರುಗಳು ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿವೆ. ಅರಣ್ಯ ಸಮೀಪದ ಈ ಗ್ರಾಮದಲ್ಲಿ ನೀರಿನ…

    Continue reading
    NH-44 ಕಾಮಗಾರಿಗಳ ಶೀಘ್ರ ಪೂರ್ಣಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಸೂಚನೆ: ಹೈವೇ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ

    ಬೆಂಗಳೂರು: ಬೆಂಗಳೂರು–ಚಂದಾಪುರ–ಅತ್ತಿಬೆಲೆ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸಂಚಾರ ದಟ್ಟಣೆ ನಿವಾರಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.Contentsಪರಿಶೀಲನೆ ನಡೆಸಿದ ಪ್ರಮುಖ ಕಾಮಗಾರಿಗಳು:ಸಂಸದರ ಹೇಳಿಕೆ: ರಾಷ್ಟ್ರೀಯ ಹೆದ್ದಾರಿ…

    Continue reading

    Leave a Reply

    Your email address will not be published. Required fields are marked *