ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮುಹೂರ್ತ ಫಿಕ್ಸ್: ಸಚಿವ ಅಶ್ವಿನಿ ವೈಷ್ಣವ್‌, ವಿ ಸೋಮಣ್ಣ ಮಹತ್ವದ ಮಾಹಿತಿ; 3 ಎಕ್ಸ್‌ಪ್ರೆಸ್‌?

ಬೆಂಗಳೂರು: ಬೆಂಗಳೂರು – ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರ ಕಾಲ ಸನ್ನಿಹಿತವಾಗಿದೆ. ಸ್ವತಃ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಈ ಬಗ್ಗೆ ಉಲ್ಲೇಖಿಸಿದ್ದು, ವಿದ್ಯುದೀಕರಣ ಪೂರ್ಣವಾಗಿದ್ದು, ಈ ಮಾರ್ಗದಲ್ಲಿ ವಂದೇ ಭಾರತ್‌ ರೈಲನ್ನು ಓಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ವಂದೇ ಭಾರತ್‌ ಸಂಪೂರ್ಣ ವಿದ್ಯುತ್ ಬಳಕೆಯೊಂದಿಗೆ ಸಂಚರಿಸುತ್ತದೆ. ಆದರೆ, ಬೆಂಗಳೂರು ಮಂಗಳೂರು ಮಾರ್ಗದಲ್ಲಿ ಸಕಲೇಶಪುರದಿಂದ ಸುಬ್ರಮಣ್ಯವರೆಗಿನ ಘಾಟ್‌ ಪ್ರದೇಶದಲ್ಲಿ ವಿದ್ಯುತ್‌ ಮಾರ್ಗ ಇರಲಿಲ್ಲ. ಹೀಗಾಗಿ, ವಂದೇ ಭಾರತ್‌ ಬೇಡಿಕೆ ಇದ್ದರು ಸಂಚಾರ ತಾಂತ್ರಿಕವಾಗಿ ಅಸಾಧ್ಯವಾಗಿತ್ತು. ಸದ್ಯ ರೈಲ್ವೆ ಇಲಾಖೆಯು ಸಕಲೇಶಪುರದಿಂದ ಸುಬ್ರಮಣ್ಯವರೆಗಿನ 55 ಕಿ.ಮೀ ಮಾರ್ಗವನ್ನು ವಿದ್ಯುದ್ಧೀಕರಣ ಮಾಡಿದೆ. ಈ ಮೂಲಕ ವಂದೇ ಭಾರತ್ ಓಡಾಟ ಸಾಧ್ಯವಾಗಲಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ರೈಲ್ವೆ ಇಲಾಖೆ, ಭಾರತೀಯ ರೈಲ್ವೆಯು ಸಕಲೇಶಪುರ-ಸುಬ್ರಮಣ್ಯ ರಸ್ತೆ ಘಾಟ್‌ ವಿಭಾಗದ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸುವ ಮೂಲಕ ಪ್ರಮುಖ ಎಂಜಿನಿಯರಿಂಗ್‌ ಮೈಲಿಗಲ್ಲನ್ನು ಸಾಧಿಸಿದೆ. 2025ರ ಡಿಸೆಂಬರ್‌ 28ರಂದು ಯಶಸ್ವಿ ಎಲೆಕ್ಟ್ರಿಕ್‌ ಲೋಕೋಮೋಟಿವ್‌ ಸಂಚರಿಸಿದೆ. ಈ ಘಾಟ್‌ ವಿಸ್ತರಣೆಯ ವಿದ್ಯುದ್ದೀಕರಣದೊಂದಿಗೆ, ಇಡೀ ಬೆಂಗಳೂರು-ಮಂಗಳೂರು ರೈಲು ಮಾರ್ಗವು ಈಗ ಸಂಪೂರ್ಣವಾಗಿ ವಿದ್ಯುದ್ದೀಕರಣಗೊಂಡಿದೆ. ಇದು ಈ ಪ್ರದೇಶದಲ್ಲಿ ರೈಲು ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಸುಸ್ಥಿರತೆಯನ್ನು ಸುಧಾರಿಸುತ್ತದೆ. ಈ ಯೋಜನೆಯು ವಂದೇ ಭಾರತ್‌ ಮತ್ತು ಇತರ ವೇಗದ ಎಲೆಕ್ಟ್ರಿಕ್‌ ರೈಲುಗಳ ಕಾರ್ಯಾಚರಣೆಯನ್ನು ಸಕ್ರಿಯಗೊಳಿಸುತ್ತದೆ, ಕರಾವಳಿ ಪ್ರದೇಶಕ್ಕೆ ವೇಗದ, ಸ್ವಚ್ಛ ಮತ್ತು ಹೆಚ್ಚು ವಿಶ್ವಾಸಾರ್ಹ ಪ್ರಯಾಣವನ್ನು ನೀಡುತ್ತದೆ ಎಂದು ತಿಳಿಸಿದೆ.

ಈ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮಾತನಾಡಿ, ” ಈ ಪ್ರಮುಖ ಘಾಟ್‌ ವಿಭಾಗದ ವಿದ್ಯುದ್ದೀಕರಣವು ದೇಶದ ಐಟಿ ರಾಜಧಾನಿ ಬೆಂಗಳೂರು ಮತ್ತು ಬಂದರು ನಗರವಾದ ಮಂಗಳೂರು ಮತ್ತು ಇತರ ಕರಾವಳಿ ವಾಣಿಜ್ಯ ಕೇಂದ್ರಗಳ ನಡುವಿನ ಆರ್ಥಿಕ ಮತ್ತು ವಾಣಿಜ್ಯ ಸಂಪರ್ಕವನ್ನು ಬಲಪಡಿಸುತ್ತದೆ. ಎಲೆಕ್ಟ್ರಿಕ್‌ ರೈಲುಗಳ ಪರಿಚಯವು ಜನರ ಸುಗಮ ಸಂಚಾರ ಮತ್ತು ವ್ಯಾಪಾರ ಪ್ರಯಾಣವನ್ನು ಸುಗಮಗೊಳಿಸುತ್ತದೆ, ಆ ಮೂಲಕ ಕರಾವಳಿ ಪ್ರದೇಶದಾದ್ಯಂತ ವ್ಯಾಪಾರ, ಸೇವೆಗಳು ಮತ್ತು ಸಂಬಂಧಿತ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಈಗ ನಾವು ಮಂಗಳೂರಿಗೆ ಈ ಮಾರ್ಗದ ಮೂಲಕ ವಂದೇ ಭಾರತ್‌ ರೈಲನ್ನು ಓಡಿಸಲು ಸಾಧ್ಯವಾಗುತ್ತದೆ ” ಎಂದು ಹೇಳಿದರು.

ವಿ ಸೋಮಣ್ಣ ಏನಂದ್ರು?

ಈ ಬಗ್ಗೆ ಟ್ವೀಟ್‌ ಮಾಡಿರುವ ಸಚಿವ ವಿ ಸೋಮಣ್ಣ ” ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಕನಸಿನ ಯಶಸ್ಸು ಹಾಗೂ ರೈಲ್ವೇ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್‌ ಅವರ ಕಾರ್ಯಕ್ಷಮತೆಗೆ ಸಾಕ್ಷಿ. ಹಾಗೆಯೇ, ಮಂಗಳೂರು ಭಾಗದ ಜನರ ಬಹುಬೇಡಿಕೆಯಾಗಿರುವ ವಂದೇ ಭಾರತ್ ರೈಲು ಸಂಚಾರಿಸುವ ಕಾಲವೂ ಸನ್ನಿಹಿತವಾಗಿದೆ ” ಎಂದಿದ್ದಾರೆ.

ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಿಂದ ವಂದೇ ಭಾರತ್ ರೈಲಿಗೆ ಪತ್ರ

ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ದಿನೇಶ್‌ ಗುಂಡೂರಾವ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ವಂದೇ ಭಾರತ್ ರೈಲಿಗೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿದ್ದಾರೆ. “ಕರಾವಳಿ ಮತ್ತು ಬೆಂಗಳೂರು ನಡುವಿನ ಸಂಪರ್ಕಕ್ಕೆ ಹೊಸ ವೇಗ ನೀಡಲು ವಂದೇ ಭಾರತ್ ರೈಲು ಸೇವೆ ಒದಗಿಸುವಂತೆ ಮಾನ್ಯ ಕೇಂದ್ರ ರೈಲ್ವೆ ಸಚಿವರಾದ ಅಶ್ವೀನ್ ವೈಷ್ಣವ್‌ ಅವರಿಗೆ ಮಂಗಳೂರು ಜನತೆಯ ಪರವಾಗಿ ಮನವಿ ಮಾಡಿ ಪತ್ರ ಬರೆದಿದ್ದೇನೆ. ಮಂಗಳೂರು ಮತ್ತು ಬೆಂಗಳೂರು ಕರ್ನಾಟಕದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳು. ಮಂಗಳೂರನ್ನು ಬೆಂಗಳೂರಿಗೆ ಪರ್ಯಾಯವಾದ ಅತ್ಯಾಧುನಿಕ ಉದ್ಯೋಗ ಮತ್ತು ಕೈಗಾರಿಕಾ ತಾಣವನ್ನಾಗಿ ರೂಪಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಆದರೆ, ಈ ಎರಡು ನಗರಗಳ ನಡುವಿನ ವೇಗದ ಸಾರಿಗೆ ಸಂಪರ್ಕದ ಕೊರತೆಯು ಈ ಬೆಳವಣಿಗೆಗೆ ದೊಡ್ಡ ಅಡ್ಡಿಯಾಗಿದೆ. ಪ್ರಸ್ತುತ ಸಾವಿರಾರು ಉದ್ಯಮಿಗಳು ಮತ್ತು ವೃತ್ತಿಪರರು ಕೇವಲ ಕೆಲವೇ ಗಂಟೆಗಳ ಕೆಲಸಕ್ಕಾಗಿ ರಾತ್ರಿ ಪೂರ್ತಿ ಪ್ರಯಾಣ ಮಾಡಬೇಕಾದ ಅನಿವಾರ್ಯತೆ ಇದೆ. ಇದು ನಮ್ಮ ಶ್ರಮಜೀವಿ ಜನರಿಗೆ ಆಗುತ್ತಿರುವ ಅನ್ಯಾಯ. ಈ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಜನಸಾಮಾನ್ಯರ ಅನುಕೂಲಕ್ಕಾಗಿ ಈ ಕೆಳಗಿನಂತೆ ವಂದೇ ಭಾರತ್ ರೈಲುಗಳನ್ನು ಆರಂಭಿಸಬೇಕು ” ಎಂದಿದ್ದಾರೆ.

ಸಚಿವ ಕೋರಿರುವ ರೈಲಿನ ವೇಳಾಪಟ್ಟಿ ಏನು?

” ಬೆಳಗ್ಗೆ 4:00 ಗಂಟೆಗೆ, ಬೆಳಗ್ಗೆ 10:00 ಗಂಟೆಗೆ, ಸಂಜೆ 6:00 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ 03 ವಂದೇ ಭಾರತ್ ರೈಲುಗಳ ಸೇವೆ ಒದಗಿಸುವಂತೆ ಉಲ್ಲೇಖಿಸಿದ್ದೇನೆ. ಈ ರೈಲು ಸಂಪರ್ಕವು ಕೇವಲ ಪ್ರಯಾಣವನ್ನಷ್ಟೇ ಅಲ್ಲದೆ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೂ ದೊಡ್ಡ ಚೈತನ್ಯ ನೀಡಲಿದೆ. ಕರಾವಳಿ ಜನರ ಈ ನ್ಯಾಯಯುತ ಬೇಡಿಕೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂಬ ವಿಶ್ವಾಸ ಇರಿಸಿದ್ದೇನೆ ” ಎಂದು ತಿಳಿಸಿದ್ದಾರೆ.

  • Related Posts

    ಚಿತ್ತಾಪುರದ ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಿಎಂ

    ಚಿತ್ತಾಪುರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ಸದ್ಗುರು ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು.Contentsಧಾರ್ಮಿಕ ದರ್ಶನ ಮತ್ತು ಆಶೀರ್ವಾದ:ಗಣ್ಯರ ಉಪಸ್ಥಿತಿ: ಧಾರ್ಮಿಕ ದರ್ಶನ ಮತ್ತು ಆಶೀರ್ವಾದ:…

    Continue reading
    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗೆ ಆಕ್ರೋಶ: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ ಜಂಟಿ ಮಾಧ್ಯಮಗೋಷ್ಠಿ

    ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಪ್ರಮುಖ ನಾಯಕರು, ಬಿಜೆಪಿಯ…

    Continue reading

    Leave a Reply

    Your email address will not be published. Required fields are marked *