ಮೈಸೂರು: ಇಲ್ಲಿನ ಲಲಿತ ಮಹಲ್ ಹೋಟೆಲ್ನಲ್ಲಿ ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕಿನ ಛಾಯಾಗ್ರಾಹಕ ಸಂಘದ ವತಿಯಿಂದ ಆಯೋಜಿಸಿದ್ದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕ್ಯಾಲೆಂಡರ್ ಅನ್ನು ಹೆಚ್.ಡಿ. ಕೋಟೆ ಕ್ಷೇತ್ರದ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಛಾಯಾಗ್ರಹಣ ಕ್ಷೇತ್ರದ ಮಹತ್ವ, ಸಮಾಜದಲ್ಲಿ ಛಾಯಾಗ್ರಾಹಕರ ಪಾತ್ರ ಹಾಗೂ ಅವರ ಸೃಜನಶೀಲತೆಯ ಕುರಿತು ಮಾತನಾಡಿ, ಸಂಘದ ಸದಸ್ಯರು ಮಾಡುತ್ತಿರುವ ಕಲಾತ್ಮಕ ಹಾಗೂ ಸಾಮಾಜಿಕ ಸೇವೆಯನ್ನು ಶ್ಲಾಘಿಸಲಾಯಿತು.
ನೂತನ ವರ್ಷವು ಎಲ್ಲರಿಗೂ ಆರೋಗ್ಯ, ಸಂತೋಷ ಹಾಗೂ ಯಶಸ್ಸನ್ನು ತರಲಿ ಎಂದು ಹಾರೈಸುತ್ತಾ, ಮುಂದಿನ ದಿನಗಳಲ್ಲಿ ಸಂಘವು ಇನ್ನಷ್ಟು ಸಾಧನೆಗಳೊಂದಿಗೆ ಮುನ್ನಡೆಯಲಿ ಎಂಬ ಶುಭಾಶಯಗಳನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವು ಆತ್ಮೀಯ ಹಾಗೂ ಅರ್ಥಪೂರ್ಣ ವಾತಾವರಣದಲ್ಲಿ ನಡೆಯಿತು.







