ಯಮಕನಮರಡಿಯಲ್ಲಿ ಅತ್ಯಾಧುನಿಕ ಪೊಲೀಸ್ ಫೈರಿಂಗ್ ರೇಂಜ್ ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಯಮಕನಮರಡಿ ಕ್ಷೇತ್ರದ ಪಾಶ್ಚಾಪೂರ ಗ್ರಾಮದ ಸಮೀಪದಲ್ಲಿ ಇಂದು ಕರ್ನಾಟಕ ಪೊಲೀಸ್ ಇಲಾಖೆಯ ಶೂಟಿಂಗ್ ತರಬೇತಿ ಕೇಂದ್ರವನ್ನು (ಫೈರಿಂಗ್ ರೇಂಜ್) ಉದ್ಘಾಟಿಸಲಾಯಿತು.

ನಮ್ಮ ಯಮಕನಮರಡಿ ಕ್ಷೇತ್ರದಲ್ಲಿ ಪೊಲೀಸ್ ಇಲಾಖೆಯ ಮಹತ್ವದ ತರಬೇತಿ ಕೇಂದ್ರ ಸ್ಥಾಪನೆಯಾಗಿರುವುದು ಸಂತಸವನ್ನು ತಂದಿದೆ.

ಈ‌ ವೇಳೆ ಬೆಳಗಾವಿ‌‌‌ ಜಿಲ್ಲೆ ಪೊಲೀಸ್ ಅಧಿಕ್ಷಕರಾದ ಡಾ. ಭೀಮಾಶಂಕರ ‌ಎಸ್. ಗುಳೇದ್, ಹೆಚ್ಚುವರಿ ಪೋಲಿಸ್ ಅಧಿಕ್ಷಕರು ಶ್ರೀ ಆರ್.ಬಿ. ಬಸರಗಿ, ಶ್ರೀ ಅಶೋಕ ಝಂಜರವಾಡ ಅವರು ಸೇರಿದಂತೆ ‌ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಹುಬ್ಬರವಾಡಿ, ಬೂದಿಹಾಳ, ಮೇಖಳಿ ಹಾಗೂ ಮಾಡಲಗಿ ಗ್ರಾಮಗಳಿಗೆ ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಲಾಯಿತು.

ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವವನ್ನು ಎದುರಿಸುತ್ತಿದ್ದ ರಾಯಬಾಗ ತಾಲೂಕಿನ 19 ಗ್ರಾಮಗಳಿಗೆ ಈ ಯೋಜನೆ ಜಾರಿಗೊಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶಗಳ ಕೃಷಿ, ಕುಡಿಯುವ ನೀರು ಮತ್ತು ಪರಿಸರಕ್ಕೆ ಶಾಶ್ವತ ಪರಿಹಾರ ದೊರೆಯಲಿದೆ.

ಈ ಸಂದರ್ಭದಲ್ಲಿ ಗ್ರಾಮಸ್ಥರು ತುಂಬಿದ ಕೆರೆಗಳಿಗೆ ಬಾಗಿನ ಅರ್ಪಿಸಿ ಸಂತಸ ವ್ಯಕ್ತಪಡಿಸಿದರು. ಜೊತೆಗೆ ನನ್ನನ್ನು ಆತ್ಮೀಯವಾಗಿ ಸತ್ಕರಿಸಿ ಗೌರವಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಮಹಾವೀರ ಮೋಹಿತೆ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀ ಅಪ್ಪಾಸಾಹೇಬ ಕುಲಗುಡೆ, ಮುಖಂಡರಾದ ಶ್ರೀ ಅಮಿತ ಘಾಟಗೆ ಸೇರಿದಂತೆ ಅನೇಕ ಸ್ಥಳೀಯ ನಾಯಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

  • Related Posts

    ಬೆಳ್ಳೋಡಿ ಕನಕ ಗುರುಪೀಠದಲ್ಲಿ ತ್ರಿವಿಧ ದಾಸೋಹದ ಸಂಭ್ರಮ: ಪೂಜ್ಯ ಶ್ರೀಗಳ ಜನ್ಮದಿನದ ಅಂಗವಾಗಿ ಬಿ.ವೈ. ವಿಜಯೇಂದ್ರ ಶುಭ ಹಾರೈಕೆ

    ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೋಡಿಯ ಶ್ರೀ ಕನಕ ಗುರುಪೀಠದ ಶಾಖಾ ಶ್ರೀಮಠದ ದಶಮಾನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಇಂದು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದರು. ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ…

    Continue reading
    ಬೆಂಗಳೂರು-ಮೈಸೂರು ರೈಲ್ವೆ ಮಾರ್ಗ ಪರಿವೀಕ್ಷಣೆ: ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿ. ಸೋಮಣ್ಣ ಜಂಟಿ ಸುದ್ದಿಗೋಷ್ಠಿ

    ಮೈಸೂರು: ಬೆಂಗಳೂರು ಮತ್ತು ಮೈಸೂರು ನಡುವಿನ ರೈಲ್ವೆ ಸಂಪರ್ಕ ಹಾಗೂ ಮೂಲಸೌಕರ್ಯಗಳ ಕುರಿತು ಇಂದು ಕೇಂದ್ರ ಸಚಿವರುಗಳ ತಂಡ ಮಹತ್ವದ ಪರಿಶೀಲನೆ ನಡೆಸಿತು. ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ…

    Continue reading

    Leave a Reply

    Your email address will not be published. Required fields are marked *