ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಸ್ಟೇಷನ್ನಲ್ಲಿ ಮಹಿಳೆಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರದ “ದ್ವೇಷ ರಾಜಕಾರಣ” ಮತ್ತು ಆಡಳಿತ ಯಂತ್ರದ ದುರುಪಯೋಗದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ ಅವರ ನೇತೃತ್ವದಲ್ಲಿ ಇಂದು ನಗರದ ಸ್ಟೇಷನ್ ರಸ್ತೆಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ಜರುಗಿತು.
ಸರ್ಕಾರದ ವೈಫಲ್ಯಕ್ಕೆ ತೀವ್ರ ಟೀಕೆ:
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಆರ್. ಅಶೋಕ ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು:
ಪೊಲೀಸರ ಮೇಲೆ ಒತ್ತಡ: “ಹುಬ್ಬಳ್ಳಿ ಪ್ರಕರಣದ ಸಂತ್ರಸ್ತ ಮಹಿಳೆಯನ್ನೇ ಬಂಧಿಸಲು ಪೊಲೀಸರ ಮೇಲೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿತ್ತು. ಅಧಿಕಾರಿಗಳಿಗೆ ವರ್ಗಾವಣೆಯ ಬೆದರಿಕೆ ಒಡ್ಡಲಾಗಿತ್ತು,” ಎಂದು ಅವರು ಗಂಭೀರವಾಗಿ ಆರೋಪಿಸಿದರು.
ರಾಜ್ಯಕ್ಕೆ ಕಪ್ಪುಚುಕ್ಕೆ: “ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವುದು ಇಡೀ ರಾಜ್ಯವೇ ತಲೆತಗ್ಗಿಸುವಂತ ಘಟನೆ. ಇದು ಕಾಂಗ್ರೆಸ್ ಸರ್ಕಾರದ ಕಾನೂನು ಸುವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿ,” ಎಂದರು.
ಸಾಂವಿಧಾನಿಕ ಸಂಸ್ಥೆಗಳ ಪ್ರವೇಶ: ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಗಳು ಸ್ವಯಂಪ್ರೇರಿತವಾಗಿ ಮಧ್ಯಪ್ರವೇಶಿಸುವ ಪರಿಸ್ಥಿತಿ ಬಂದಿರುವುದು ಈ ಸರ್ಕಾರದ ಆಡಳಿತಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಶ್ರೀ ಚಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ನಾಯಕರು, ಶ್ರೀ ಮನೀಶ್ ಟೆಂಗಿನಕಾಯಿ, ಶಾಸಕರು, ಶ್ರೀ ತಿಪ್ಪಣ್ಣ ಮಜ್ಜಗಿ, ಜಿಲ್ಲಾಧ್ಯಕ್ಷರು, ಶ್ರೀ ನಿಂಗಪ್ಪ ಸುತಗಟ್ಟಿ, ಪ್ರಮುಖರು, ಶ್ರೀ ಅಶೋಕ ಕಾಟವೆ ಮತ್ತು ಶ್ರೀಮತಿ ಸೀಮಾ ಮಸೂತಿ, ಮಾಜಿ ಶಾಸಕರು. ಸಭೆಯಲ್ಲಿ ಪಕ್ಷದ ನೂರಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ, ಸರ್ಕಾರದ ದೌರ್ಜನ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.







