ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಮೈಸೂರು ತಾಲ್ಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರು ಕೆರೆ ಅಭಿವೃದ್ಧಿ ಕಾಮಗಾರಿಗೆ ಇಂದು ಅದ್ಧೂರಿಯಾಗಿ ಚಾಲನೆ ನೀಡಲಾಯಿತು.
ಮಾಜಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕ್ಷೇತ್ರದ ಶಾಸಕರಾದ ಶ್ರೀ ಜಿ.ಟಿ. ದೇವೇಗೌಡ ಅವರೊಂದಿಗೆ ಜತೆಗೂಡಿ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆಯನ್ನು ನೆರವೇರಿಸಿದರು.
ಅಭಿವೃದ್ಧಿಯೇ ಗುರಿ: ಡಾ. ಯತೀಂದ್ರ ಸಿದ್ದರಾಮಯ್ಯ
ಭೂಮಿಪೂಜೆ ನೆರವೇರಿಸಿದ ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, “ಗ್ರಾಮೀಣ ಭಾಗದ ಅಂತರ್ಜಲ ವೃದ್ಧಿ ಮತ್ತು ರೈತರ ಹಿತದೃಷ್ಟಿಯಿಂದ ಕೆರೆಗಳ ಅಭಿವೃದ್ಧಿ ಅತೀ ಅಗತ್ಯವಾಗಿದೆ. ಮುಳ್ಳೂರು ಕೆರೆಯ ಪುನಶ್ಚೇತನದಿಂದ ಈ ಭಾಗದ ರೈತರಿಗೆ ಮತ್ತು ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಾತೀತವಾಗಿ ಜನಪದ ಕೆಲಸಗಳನ್ನು ಮಾಡುವುದು ನಮ್ಮ ಗುರಿ,” ಎಂದು ತಿಳಿಸಿದರು.
ರಾಕೇಶ್ ಪಾಪಣ್ಣ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಎಸ್. ಅರುಣ್ ಕುಮಾರ್: ಜಿಲ್ಲಾಧ್ಯಕ್ಷರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ, ಕೆ. ಮರೀಗೌಡ: ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಗುರುಸ್ವಾಮಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಂಚಪ್ಪ: ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕರು,ಜಿ.ಕೆ. ಬಸವಣ್ಣ: ಮುಖಂಡರು ಗ್ರಾಮದ ಪ್ರಮುಖರು ಹಾಗೂ ರಾಜಕೀಯ ಮುಖಂಡರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಮುಖರು
ಕಾರ್ಯಕ್ರಮದಲ್ಲಿ ಗೋಪಾಲಪುರ ಗ್ರಾಮ ಪಂಚಾಯಿತಿಯ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮುಳ್ಳೂರು ಗ್ರಾಮದ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದು, ಅಭಿವೃದ್ಧಿ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು.







