ಬೀದರ್‌ನಲ್ಲಿ ಜನವರಿ 24ರಿಂದ 26ರವರೆಗೆ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’: ಲೋಗೋ ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೀದರ್: ಭಾಲ್ಕಿಯ ಹಿರೇಮಠ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜನೆವರಿ 24, 25 ಮತ್ತು 26 ರಂದು ಬೀದರ್ ನಗರದ ಸಾಯಿ ಸ್ಕೂಲ್ ಮೈದಾನದಲ್ಲಿ ರಾಜ್ಯ ಮಟ್ಟದ ‘ವೀರಲೋಕ ಪುಸ್ತಕ ಸಂತೆ’ ಆಯೋಜಿಸಲಾಗಿದೆ ಎಂದು ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಪುಸ್ತಕ ಸಂತೆಯ ಅಧಿಕೃತ ಲೋಗೋ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜ್ಞಾನದ ದಾಸೋಹಕ್ಕೆ ಪುಸ್ತಕ ಸಂತೆ ವೇದಿಕೆ

“ಬೀದರ್ ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ಉತ್ತೇಜಿಸಲು ಮತ್ತು ಓದುಗರಿಗೆ ಒಂದೇ ಸೂರಿನಡಿ ಲಕ್ಷಾಂತರ ಪುಸ್ತಕಗಳನ್ನು ಲಭ್ಯವಾಗಿಸಲು ಈ ಪುಸ್ತಕ ಸಂತೆಯನ್ನು ಆಯೋಜಿಸಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಜ್ಞಾನದ ಹಬ್ಬಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಪ್ರಕಾಶಕರು ಮತ್ತು ಸಾಹಿತ್ಯ ಪ್ರೇಮಿಗಳು ಆಗಮಿಸಲಿದ್ದಾರೆ,” ಎಂದು ಸಚಿವರು ವಿವರಿಸಿದರು.

ಧಾರ್ಮಿಕ ಹಾಗೂ ರಾಜಕೀಯ ಗಣ್ಯರ ಸಾಥ್

ಪತ್ರಿಕಾಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠದ ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಪುಸ್ತಕ ಸಂತೆಯಂತಹ ಕಾರ್ಯಕ್ರಮಗಳು ಯುವ ಪೀಳಿಗೆಯಲ್ಲಿ ಓದಿನ ಹವ್ಯಾಸ ಬೆಳೆಸಲು ಪೂರಕವಾಗಿವೆ ಎಂದು ಪೂಜ್ಯರು ಅಭಿಪ್ರಾಯಪಟ್ಟರು.

ಡಾ. ಚಂದ್ರಶೇಖರ ಪಾಟೀಲ: ವಿಧಾನ ಪರಿಷತ್ ಸದಸ್ಯರು, ಶ್ರೀ ಭೀಮರಾವ ಪಾಟೀಲ: ವಿಧಾನ ಪರಿಷತ್ ಸದಸ್ಯರು, ಶ್ರೀ ಸುರೇಶ ಚನ್ನಶೆಟ್ಟಿ: ಜಿಲ್ಲಾಧ್ಯಕ್ಷರು, ಕಸಾಪ ಬೀದರ್, ಶ್ರೀ ಶಿವಶಂಕರ ಟೋಕರೆ: ಕೋಶಾಧ್ಯಕ್ಷರು, ಕಸಾಪ, ಶ್ರೀ ವೀರಪಾಕ್ಷ ಗಾದಗಿ: ವೀರಲೋಕದ, ಮುಖ್ಯಸ್ಥರು ಹಾಗೂ ಯುವ ಉತ್ಸಾಹಿಗಳು ಉಪಸ್ಥಿತರಿದ್ದ ಪ್ರಮುಖರು

ಬೀದರ್ ಜಿಲ್ಲೆಯ ಸಾಹಿತ್ಯ ಇತಿಹಾಸದಲ್ಲಿ ಈ ಪುಸ್ತಕ ಸಂತೆ ಹೊಸ ಮೈಲಿಗಲ್ಲಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪುಸ್ತಕ ಪ್ರೇಮಿಗಳು ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ.

  • Related Posts

    ಚಿತ್ತಾಪುರದ ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ಸಿಎಂ

    ಚಿತ್ತಾಪುರ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ಸದ್ಗುರು ಶ್ರೀ ಕೋಡಿಸಿದ್ದೇಶ್ವರ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು. ಮಠಕ್ಕೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭಕ್ತಿಪೂರ್ವಕವಾಗಿ ಸ್ವಾಗತಿಸಲಾಯಿತು.Contentsಧಾರ್ಮಿಕ ದರ್ಶನ ಮತ್ತು ಆಶೀರ್ವಾದ:ಗಣ್ಯರ ಉಪಸ್ಥಿತಿ: ಧಾರ್ಮಿಕ ದರ್ಶನ ಮತ್ತು ಆಶೀರ್ವಾದ:…

    Continue reading
    ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಗೆ ಆಕ್ರೋಶ: ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ನಾಯಕರ ಜಂಟಿ ಮಾಧ್ಯಮಗೋಷ್ಠಿ

    ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನೀಡುತ್ತಿರುವ ಅವಹೇಳನಕಾರಿ ಹೇಳಿಕೆಗಳನ್ನು ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಪ್ರಮುಖ ನಾಯಕರು, ಬಿಜೆಪಿಯ…

    Continue reading

    Leave a Reply

    Your email address will not be published. Required fields are marked *