ಬೆಳಗಾವಿ – ಬೆಂಗಳೂರು – ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್‌ಗೆ ಬೇಡಿಕೆ: ಕೇಂದ್ರ ರೈಲ್ವೆ ಸಚಿವರಿಗೆ ಜಗದೀಶ್ ಶೆಟ್ಟರ್ ಮನವಿ

ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈಲ್ವೆ ಮೂಲಸೌಕರ್ಯ ಬಲಪಡಿಸಲು ಮತ್ತು ಪ್ರಯಾಣಿಕರ ದಶಕಗಳ ಬೇಡಿಕೆಯನ್ನು ಈಡೇರಿಸಲು ಸಂಸದರಾದ ಜಗದೀಶ್ ಶೆಟ್ಟರ್ ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷರನ್ನು ಭೇಟಿ ಮಾಡಿ ಪ್ರಮುಖ ಪ್ರಸ್ತಾವನೆಗಳನ್ನು ಸಲ್ಲಿಸಿದರು.

1. ಎಂಟನೇ ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆಗೆ ಪ್ರಸ್ತಾವನೆ

2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಏಳು ನಗರಗಳಿಗೆ ಹೈಸ್ಪೀಡ್ ರೈಲು ಕಾರಿಡಾರ್ ಘೋಷಿಸಲಾಗಿದೆ. ಈ ಯೋಜನೆಯಡಿ ಬೆಂಗಳೂರು – ಬೆಳಗಾವಿ – ಮುಂಬೈ ನಡುವೆ 8ನೇ ಹೈಸ್ಪೀಡ್ ಕಾರಿಡಾರ್ ಘೋಷಿಸುವಂತೆ ಶೆಟ್ಟರ್ ಒತ್ತಾಯಿಸಿದರು.

ಪ್ರಯೋಜನ: ಈ ಮಾರ್ಗವು ಘೋಷಣೆಯಾದಲ್ಲಿ ಉತ್ತರ ಕರ್ನಾಟಕದ ಸಣ್ಣ ಮತ್ತು ಮಧ್ಯಮ ನಗರಗಳ ಕೈಗಾರಿಕಾ ಹಾಗೂ ಆರ್ಥಿಕ ಅಭಿವೃದ್ಧಿಗೆ ದೊಡ್ಡ ವೇಗ ಸಿಗಲಿದೆ.

2. ನೂತನ ರೈಲು ಮಾರ್ಗಗಳ ನಿರ್ಮಾಣ

ಬೆಳಗಾವಿ – ಬಾಗಲಕೋಟೆ ಸಂಪರ್ಕ: ಪರಕನಟ್ಟಿ, ಗೋಕಾಕ ಶಹರ ಮತ್ತು ಯಾದವಾಡ ಮಾರ್ಗವಾಗಿ ಬಾಗಲಕೋಟೆಗೆ ನೂತನ ರೈಲು ಮಾರ್ಗ ನಿರ್ಮಿಸುವಂತೆ ಕೋರಿದರು. ಈ ಭಾಗದಲ್ಲಿ ಈಗಾಗಲೇ ಹಲವಾರು ಸಿಮೆಂಟ್ ಮತ್ತು ಸಕ್ಕರೆ ಕಾರ್ಖಾನೆಗಳಿದ್ದು, ರೈಲು ಸಂಪರ್ಕದಿಂದ ಸರಕು ಸಾಗಣೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಲೋಕಾಪೂರ – ಧಾರವಾಡ ಮಾರ್ಗ: ರೈಲ್ವೆ ಮಂಡಳಿ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ ಶೆಟ್ಟರ್, ಲೋಕಾಪೂರ – ರಾಮದುರ್ಗ – ಸವದತ್ತಿ – ಧಾರವಾಡ ನಡುವೆ ನೂತನ ಮಾರ್ಗದ ‘ಪೂರ್ವ ಸಮೀಕ್ಷಾ’ ಕಾರ್ಯಕ್ಕೆ ಅನುಮೋದನೆ ನೀಡುವಂತೆ ಕೋರಿದರು.

3. ವಂದೇ ಭಾರತ ರೈಲು ಸಮಯ ಬದಲಾವಣೆ

ಬೆಳಗಾವಿಯಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ಎಕ್ಸ್‌ಪ್ರೆಸ್‌ ರೈಲು ಸದ್ಯ ಬೆಳಿಗ್ಗೆ 05:35ಕ್ಕೆ ಹೊರಡುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಸಮಯವನ್ನು ಬೆಳಿಗ್ಗೆ 06:15ಕ್ಕೆ ಬದಲಾಯಿಸುವಂತೆ ಸಚಿವರಿಗೆ ತಿಳಿಸಲಾಯಿತು. ಇದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

4. ರದ್ದಾದ ರೈಲುಗಳ ಪುನಾರಂಭ

ಬೆಳಗಾವಿ – ಮಣಗೂರ ನಡುವೆ ಈ ಹಿಂದೆ ಸಂಚರಿಸುತ್ತಿದ್ದ, ಆದರೆ ಈಗ ರದ್ದಾಗಿರುವ ರೈಲು ಸೇವೆಯನ್ನು ಕೂಡಲೇ ಪುನಾರಂಭಿಸಿ ಬೆಳಗಾವಿ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ರೈಲ್ವೆ ಮಂಡಳಿ ಅಧ್ಯಕ್ಷರಲ್ಲಿ ಮನವಿ ಮಾಡಿದರು.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *