ಗಜೇಂದ್ರಗಡ: ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಇಡಲಾಗಿದ್ದು, ಶಹರದ ವಾರ್ಡ್ ನಂ. 8, 18 ಹಾಗೂ 21 ರಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕಟ್ಟಡಗಳನ್ನು ಅದ್ಧೂರಿಯಾಗಿ ಉದ್ಘಾಟಿಸಲಾಯಿತು.
ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಪೂರಕವಾದ ಪರಿಸರವನ್ನು ಒದಗಿಸುವ ನಿಟ್ಟಿನಲ್ಲಿ ಈ ಆಧುನಿಕ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗಿದೆ.
ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಗಜೇಂದ್ರಗಡ ಶಹರ ಘಟಕದ ಕಾಂಗ್ರೆಸ್ ಅಧ್ಯಕ್ಷರಾದ ಶಿವರಾಜ ಘೋರ್ಪಡೆ ಅವರು ಮಾತನಾಡಿ, “ಮಕ್ಕಳ ಭವಿಷ್ಯದ ಅಡಿಪಾಯ ಗಟ್ಟಿಯಾಗಲು ಅಂಗನವಾಡಿಗಳ ಪಾತ್ರ ಮುಖ್ಯ. ಸರ್ಕಾರ ಮತ್ತು ಮುಖಂಡರ ಶ್ರಮದಿಂದ ಇಂದು ಪಟ್ಟಣದ ಮೂರು ವಾರ್ಡ್ಗಳಲ್ಲಿ ಸುಸಜ್ಜಿತ ಕಟ್ಟಡಗಳು ಲಭ್ಯವಾಗಿವೆ,” ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖ ಮುಖಂಡರಾದ: ಗುರುಪಾದಗೌಡ ಪಾಟೀಲ್, ಸಿದಣ್ಣ ಬಂಡಿ, ಚಂಬಣ್ಣ ಚವಡಿ, ಶ್ರೀಧರ ಬಿದರಳ್ಳಿ, ಎ. ಡಿ. ಕೋಲಕಾರ, ಉಮೇಶ ರಾಠೋಡ, ಮಂಜುಳಾ ರೇವಡಿ, ರಾಜು ಸಾಂಗ್ಲಿಕರ್, ಸೇರಿದಂತೆ ಹಲವು ಮುಖಂಡರು, ನಗರಸಭೆ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.







