ಕೂಡ್ಲಿಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನಿಲುವುಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ನೀಡಿದ್ದ ದೇಶವ್ಯಾಪಿ ಮುಷ್ಕರದ ಕರೆಗೆ ಓಗೊಟ್ಟು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ CITU ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಗಾಂಧಿ ಸ್ಮಾರಕದಿಂದ ಆಡಳಿತ ಸೌಧದವರೆಗೆ ಪಾದಯಾತ್ರೆ
ಪಟ್ಟಣದ ಮಹತ್ಮಾ ಗಾಂಧೀ ಚಿತಾ ಭಸ್ಮ ಸ್ಮಾರಕದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಜಿಲ್ಲೆ, ತಾಲೂಕು ಹಾಗೂ ವಿವಿಧ ಗ್ರಾಮ ಘಟಕಗಳ ನೂರಾರು ಕಾರ್ಮಿಕರು ಭಾಗವಹಿಸಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪ್ರತಿಭಟನಾಕಾರರು, ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯು ಅಂತಿಮವಾಗಿ ತಾಲೂಕು ಆಡಳಿತ ಸೌಧದ ಆವರಣ ತಲುಪಿತು.
ಹಕ್ಕೊತ್ತಾಯಗಳ ಮಂಡನೆ
ಪ್ರತಿಭಟನೆಯ ನಂತರ ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಮಿಕ ಸಂಘಟನೆಯ ಮುಖಂಡರು, ಸರ್ಕಾರಗಳು ಕಾರ್ಮಿಕರ ಹಿತಾಸಕ್ತಿಯನ್ನು ಬಲಿಗೊಟ್ಟು ಕಾರ್ಪೊರೇಟ್ ಪರ ನಿಲುವು ತಳೆಯುತ್ತಿವೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರಮುಖ ಮುಖಂಡರು: ಎಂ. ಕರುಣಾನಿಧಿ (ಹಿರಿಯ ಮುಖಂಡರು), ಸಿ. ವಿರುಪಾಕ್ಷಪ್ಪ, ಗುನ್ನಳ್ಳಿ ರಾಘವೇಂದ್ರ, ಮೊರಬನಹಳ್ಳಿ ಕರಿಯಪ್ಪ,ಗ್ರಾಮ ಪಂಚಾಯ್ತಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಹಾಗೂ ಮಹಿಳಾ ಮುಖಂಡರು.







