ಬೆಂಗಳೂರು: ರಾಜಧಾನಿಯ ನಾಯಂಡಹಳ್ಳಿ ಭಾಗದ ರೈಲು ಪ್ರಯಾಣಿಕರ ದಶಕಗಳ ಬೇಡಿಕೆ ಈಡೇರಿದೆ. ಇಂದು ನಾಯಂಡಹಳ್ಳಿ ರೈಲು ನಿಲ್ದಾಣದಲ್ಲಿ ಮೈಸೂರು ಮತ್ತು ಉತ್ತರ ಕರ್ನಾಟಕವನ್ನು ಸಂಪರ್ಕಿಸುವ ನಾಲ್ಕು ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಸ್ಥಳೀಯರಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲ
ನಾಯಂಡಹಳ್ಳಿ ನಿಲ್ದಾಣವು ಮೆಟ್ರೋ ಮತ್ತು ಬಸ್ ನಿಲ್ದಾಣಗಳಿಗೆ ಸಮೀಪವಿರುವುದರಿಂದ, ಈ ಹೆಚ್ಚುವರಿ ನಿಲುಗಡೆಯು ಸಾವಿರಾರು ದೈನಂದಿನ ಪ್ರಯಾಣಿಕರಿಗೆ, ವಿಶೇಷವಾಗಿ ಮೈಸೂರು ಮತ್ತು ಬೆಂಗಳೂರು ನಡುವೆ ಸಂಚರಿಸುವವರಿಗೆ ವರದಾನವಾಗಲಿದೆ.
ನಿಲುಗಡೆ ನೀಡಲಾದ ಪ್ರಮುಖ ರೈಲುಗಳ ಪಟ್ಟಿ:
ಮೈಸೂರು – ಕೆಎಸ್ಆರ್ ಸಿಟಿ ಚಾಮುಂಡಿ ಎಕ್ಸ್ಪ್ರೆಸ್
ಮೈಸೂರು – ಬಾಗಲಕೋಟೆ ಬಸವ ಎಕ್ಸ್ಪ್ರೆಸ್
ಟುಟಿಕೋರಿನ್ – ಮೈಸೂರು ಎಕ್ಸ್ಪ್ರೆಸ್
ಮೈಸೂರು – ಪಂಡರಾಪುರ ಗೋಲ್ ಗುಂಬಜ್ ಎಕ್ಸ್ಪ್ರೆಸ್
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ರೈಲ್ವೆ ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರು ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಶಿವಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳು. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪ್ರಮುಖ ಮುಖಂಡರು. ಬಿಜೆಪಿ ಕಾರ್ಯಕರ್ತರು ಮತ್ತು ಸ್ಥಳೀಯ ನಿವಾಸಿಗಳು.







