ಬೆಂಗಳೂರು : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ (KFCSC) ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಊರಬಾಗಿಲು ಶ್ರೀನಿವಾಸ್ ಅವರು ಇಂದು ಬೆಂಗಳೂರಿನ ನಿಗಮದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್. ಮುನಿಯಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶ್ರೀನಿವಾಸ್ ಅವರ ನೇಮಕಾತಿಯು ನಿಗಮದ ಕಾರ್ಯಚಟುವಟಿಕೆಗಳಿಗೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.
ಸಂದೇಶ ಮತ್ತು ಹಾರೈಕೆ
ಅಧಿಕಾರ ಸ್ವೀಕರಿಸಿದ ನೂತನ ಉಪಾಧ್ಯಕ್ಷರನ್ನು ಸಚಿವರು ಮತ್ತು ಮುಖಂಡರು ಅಭಿನಂದಿಸಿದರು. “ನೂತನ ಉಪಾಧ್ಯಕ್ಷರಾದ ಶ್ರೀನಿವಾಸ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ನೇತೃತ್ವದಲ್ಲಿ ನಿಗಮದ ಕಾರ್ಯಕ್ಷಮತೆ ಮತ್ತಷ್ಟು ವೃದ್ಧಿಯಾಗಿ, ಜನಪರ ಸೇವೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಲಿ” ಎಂದು ಸಚಿವರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.
ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ನಿಗಮದ ಪ್ರಮುಖರು ಹಾಗೂ ರಾಜಕೀಯ ಮುಖಂಡರು ಭಾಗವಹಿಸಿ ನೂತನ ಉಪಾಧ್ಯಕ್ಷರಿಗೆ ಸಾಥ್ ನೀಡಿದರು, ಜಗದೀಶ್: ನಿಗಮದ ನಿರ್ದೇಶಕರು, ಡಾ. ಹೆಚ್. ನಟರಾಜ್: ಸಚಿವರ ಆಪ್ತ ಕಾರ್ಯದರ್ಶಿಗಳು, ಲಕ್ಷ್ಮಿ ನಾರಾಯಣ: ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಜಯದೇವ್: ಪ್ರಮುಖ ಮುಖಂಡರು.
ನಿಗಮದ ಮುಂದಿನ ಸವಾಲುಗಳು
ಆಹಾರ ಭದ್ರತೆ ಮತ್ತು ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವಲ್ಲಿ ಈ ನಿಗಮವು ಪ್ರಮುಖ ಪಾತ್ರ ವಹಿಸುತ್ತದೆ. ಊರಬಾಗಿಲು ಶ್ರೀನಿವಾಸ್ ಅವರ ಅನುಭವವು ನಿಗಮದ ಆಡಳಿತಾತ್ಮಕ ಸುಧಾರಣೆಗಳಿಗೆ ಪೂರಕವಾಗಲಿದೆ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಗಣ್ಯರು ವಿಶ್ವಾಸ ವ್ಯಕ್ತಪಡಿಸಿದರು.







