ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಭ್ರಮ: ಮಹಿಳೆಯರ ರಂಗೋಲಿ ಕಲೆಗೆ ಜಿಲ್ಲಾಧಿಕಾರಿ ಮೆಚ್ಚುಗೆ

ಚಾಮರಾಜನಗರ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಹಿಳೆಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಮೆರೆದರು.

ಮಾರ್ಚ್ 10 ರಂದು ಆಯೋಜಿಸಲಾಗಿರುವ ಮುಖ್ಯ ಸಮಾರಂಭದ ಮುನ್ನೋಡಿಯಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗಮನಸೆಳೆದ ರಂಗೋಲಿ ಸ್ಪರ್ಧೆ

ಬೆಳಿಗ್ಗೆಯಿಂದಲೇ ಆರಂಭವಾದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಆಕರ್ಷಕ ವಿನ್ಯಾಸಗಳನ್ನು ಮೂಡಿಸುವ ಮೂಲಕ ಗಮನಸೆಳೆದರು. ಜಿಲ್ಲಾಧಿಕಾರಿ ಶ್ರೀರೂಪ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಪ್ರತಿ ಸ್ಪರ್ಧಿಯ ರಂಗೋಲಿಯನ್ನು ಆಸಕ್ತಿಯಿಂದ ವೀಕ್ಷಿಸಿದರು. ಅಷ್ಟೇ ಅಲ್ಲದೆ, ಇವರೇ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿ ಮಹಿಳೆಯರ ಕಲಾತ್ಮಕತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಉತ್ಸಾಹ ತುಂಬಿದ ಕ್ರೀಡಾಕೂಟ

ಮಧ್ಯಾಹ್ನದ ವೇಳೆ ನಡೆದ ಹಗ್ಗ-ಜಗ್ಗಾಟ, ಮ್ಯೂಸಿಕಲ್ ಚೇರ್, ಮತ್ತು ‘ಲೆಮನ್ ಆಂಡ್ ಸ್ಪೂನ್’ ಸ್ಪರ್ಧೆಗಳಲ್ಲಿ ಮಹಿಳಾ ಉದ್ಯೋಗಿಗಳು ಹಾಗೂ ಸಾರ್ವಜನಿಕ ಮಹಿಳೆಯರು ಸಂಭ್ರಮದಿಂದ ಪಾಲ್ಗೊಂಡರು. ದೈನಂದಿನ ಕೆಲಸದ ಒತ್ತಡದ ನಡುವೆ ಈ ಕ್ರೀಡೆಗಳು ಮಹಿಳೆಯರಲ್ಲಿ ಹೊಸ ಚೈತನ್ಯ ತುಂಬಿದವು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು, ಶ್ರೀರೂಪ – ಜಿಲ್ಲಾಧಿಕಾರಿಗಳು, ಮೋನಾ ರೋತ್ – ಸಿಇಒ, ಜಿಲ್ಲಾ ಪಂಚಾಯತ್, ಟಿ. ಜವರೇಗೌಡ – ಹೆಚ್ಚುವರಿ ಜಿಲ್ಲಾಧಿಕಾರಿಗಳು, ಡಿ.ಸಿ. ಶೃತಿ – ಉಪ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್, ರಾಜೇಶ್ವರಿ – ಉಪ ನಿರ್ದೇಶಕರು, ಜಿಲ್ಲಾ ಖಜಾನೆ, ಸುರೇಶ್ – ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ., ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿಗಳಾದ ದೀಪಾ, ಶ್ರೀಕಂಠರಾಜೇ ಅರಸ್, ವಾರ್ತಾ ಇಲಾಖೆಯ ಸುರೇಶ್ ಕುಮಾರ್, ರಂಗರಾಜು ಹಾಗೂ ಪಾಲಿಸಿ ಅಡ್ವೈಸರ್ ರಕ್ಷಿತಾ ಸೇರಿದಂತೆ ಹಲವು ಇಲಾಖೆಗಳ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *