ನವದೆಹಲಿ: ಹಾಸನ ಜಿಲ್ಲೆಯ ಕಾಫಿ ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಹಾಸನ ಜಿಲ್ಲಾ ಕಾಫಿ ಬೆಳೆಗಾರರ ಸಂಘದ ನಿಯೋಗವು ಸಂಸತ್ ಭವನದ ಕಚೇರಿಯಲ್ಲಿ ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿತು.
ಚರ್ಚೆಯ ಪ್ರಮುಖಾಂಶಗಳು:
ಬೆಳೆಗಾರರ ಹಿತದೃಷ್ಟಿಯಿಂದ ಈ ಕೆಳಗಿನ ಪ್ರಮುಖ ವಿಷಯಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು:
ಸರ್ಪೇಸಿ (SARFAESI) ಕಾಯ್ದೆ: ಈ ಕಾಯ್ದೆಯಿಂದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾನೂನಾತ್ಮಕ ತೊಂದರೆಗಳು ಮತ್ತು ಸಾಲ ಮರುಪಾವತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ಕಿರುಕುಳದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು.
ವನ್ಯಜೀವಿ-ಮಾನವ ಸಂಘರ್ಷ: ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಕಾಡಾನೆ ಸೇರಿದಂತೆ ವನ್ಯಜೀವಿಗಳ ಹಾವಳಿ ಹಾಗೂ ಇದರಿಂದ ಬೆಳೆಗಾರರು ಮತ್ತು ಕಾರ್ಮಿಕರು ಎದುರಿಸುತ್ತಿರುವ ಜೀವಭಯದ ಕುರಿತು ಸಮಾಲೋಚನೆ ನಡೆಸಲಾಯಿತು.
ನಿಯೋಗದಲ್ಲಿದ್ದ ಪ್ರಮುಖರು:
ಈ ಸಂದರ್ಭದಲ್ಲಿ ಬೆಳೆಗಾರರ ಪರವಾಗಿ ಧ್ವನಿ ಎತ್ತಲು ರಾಜ್ಯದ ಪ್ರಮುಖ ನಾಯಕರು ಸಾಥ್ ನೀಡಿದ್ದರು:
ತೇಜಸ್ವಿ ಸೂರ್ಯ, ಸಂಸದರು, ಮಲ್ಲೇಶ್ ಬಾಬು, ಸಂಸದರು, ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವರು, ಲಿಂಗೇಶ್, ಮಾಜಿ ಶಾಸಕರು, ಹಾಸನ ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಎಲ್ಲಾ ಪದಾಧಿಕಾರಿಗಳು.







