ಬೆಂಗಳೂರು: ಪುಟ್ಟೇನಹಳ್ಳಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ (RWA) ಹಮ್ಮಿಕೊಂಡಿದ್ದ ಸಭೆಯಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕರಾದ ಎಂ. ಸತೀಶ್ ರೆಡ್ಡಿ ಅವರು ಭಾಗವಹಿಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
ಬಫರ್ ಜೋನ್ ಚರ್ಚೆ: ಪುಟ್ಟೇನಹಳ್ಳಿ ಕೆರೆಯ ಬಫರ್ ಜೋನ್ (Buffer Zone) ವ್ಯಾಪ್ತಿಗೆ ಸಂಬಂಧಿಸಿದಂತೆ ನಿವಾಸಿಗಳು ಎದುರಿಸುತ್ತಿರುವ ತಾಂತ್ರಿಕ ಮತ್ತು ಕಾನೂನಾತ್ಮಕ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಕುರಿತು ನಿವಾಸಿಗಳು ತಮ್ಮ ಅಹವಾಲುಗಳನ್ನು ಜನಪ್ರತಿನಿಧಿಗಳ ಮುಂದಿಟ್ಟರು.
ಅಧಿಕಾರಿಗಳೊಂದಿಗೆ ಚರ್ಚೆ: ಸಭೆಯಲ್ಲಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿದ ಸಂಸದರು ಮತ್ತು ಶಾಸಕರು, ನಿವಾಸಿಗಳಿಗೆ ತೊಂದರೆಯಾಗದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಸೂಚಿಸಿದರು.
ಸ್ಥಳೀಯರ ಸಹಭಾಗಿತ್ವ: ಕೆರೆಯ ಸಂರಕ್ಷಣೆ ಹಾಗೂ ಸುತ್ತಮುತ್ತಲ ಪ್ರದೇಶದ ಅಭಿವೃದ್ಧಿಯಲ್ಲಿ ನಾಗರಿಕರ ಪಾತ್ರದ ಬಗ್ಗೆಯೂ ಸಭೆಯಲ್ಲಿ ಒತ್ತು ನೀಡಲಾಯಿತು.
ಉಪಸ್ಥಿತರಿದ್ದ ಪ್ರಮುಖರು:
ಈ ಸಭೆಯಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಮೋಹನ್ ರಾಜು, ಪ್ರಮುಖ ಮುಖಂಡರಾದ ರಮೇಶ್ (ಜಲ್ಲಿ), ಮುನಿರಾಮು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಪುಟ್ಟೇನಹಳ್ಳಿಯ ನೂರಾರು ಜಾಗೃತ ನಾಗರಿಕರು ಉಪಸ್ಥಿತರಿದ್ದರು.






