ಬಾಬಾಸಾಹೇಬರ ಆಶಯದಂತೆ ಸಮಾನತೆಯ ಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: “ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಜಾರಿಗೆ ತರುವ ಮೂಲಕ ಸಮಾನತೆಯ ಸಮಾಜವನ್ನು ನಿರ್ಮಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಘೋಷಿಸಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಇಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಾಧಕರಿಗೆ ಅಂಬೇಡ್ಕರ್ ಪ್ರಶಸ್ತಿ ಗೌರವ

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಮಟ್ಟದ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಪ್ರಶಸ್ತಿ ವಿಜೇತರಾದ ಸಿ.ಎಂ. ಮುನಿಯಪ್ಪ (ಪತ್ರಿಕೋದ್ಯಮ/ಸಂಘಟನೆ), ಹೆಚ್.ಎನ್. ಅಣ್ಣಯ್ಯ (ಸಂಘಟನೆ), ಹನುಮಂತರಾವ್ ದೊಡ್ಡಮನಿ (ಸಾಹಿತ್ಯ), ಶೋಭಾ ಗಸ್ತಿ (ದೇವದಾಸಿ ವಿಮೋಚನೆ) ಸೇರಿದಂತೆ ಇತರರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಸಚಿವರುಗಳಾದ, ಡಾ. ಹೆಚ್.ಸಿ. ಮಹದೇವಪ್ಪ (ಸಮಾಜ ಕಲ್ಯಾಣ ಸಚಿವರು), ಕೆ.ಹೆಚ್. ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು), ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಸಚಿವ ಹೆಚ್. ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್.

ಸೇರಿದಂತೆ ಹಲವು ಪ್ರಮುಖರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಈ ಕಾರ್ಯಕ್ರಮವು ಸಾವಿರಾರು ಜನರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು.

  • Related Posts

    ಬದನವಾಳು ಗ್ರಾಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ: ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

    ನಂಜನಗೂಡು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಪಾಲ್ಗೊಂಡು ಗೌರವ ನಮನ ಸಲ್ಲಿಸಿದರು. ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು,…

    Continue reading
    ವಿಕಸಿತ ಭಾರತದ ಮೂಲಕ ಬಾಬಾಸಾಹೇಬರ ಸಮಾನತೆಯ ಕನಸು ನನಸು: ಬಾಗೇಪಲ್ಲಿಯಲ್ಲಿ ಡಾ. ಕೆ. ಸುಧಾಕರ್ ಪ್ರತಿಪಾದನೆ

    ಬಾಗೇಪಲ್ಲಿ: “ಸಮೃದ್ಧ ಮತ್ತು ಸಮಾನತೆಯ ಭಾರತದ ಕನಸು ಕಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಸಂಕಲ್ಪದ ಮೂಲಕ ನನಸಾಗುತ್ತಿವೆ,” ಎಂದು ಮಾಜಿ ಸಚಿವರಾದ ಡಾ. ಕೆ. ಸುಧಾಕರ್…

    Continue reading

    Leave a Reply

    Your email address will not be published. Required fields are marked *