ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಪ್ರತಿ ವಾರ್ಡ್ಗಳ ಅಭಿವೃದ್ಧಿಗೆ ಬದ್ಧವಾಗಿರುವ ಶಾಸಕ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ವಾರ್ಡ್ ಸಂಖ್ಯೆ 127ರ ಕಾಟನ್ ಪೇಟೆ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ರಸ್ತೆ ಡಾಂಬರೀಕರಣ: ಅಕ್ಕಿಪೇಟೆ, ನಾಗಮ್ಮ ನಗರ ಹಾಗೂ ನೇತಾಜಿನಗರದ ಮುಖ್ಯರಸ್ತೆಗಳಲ್ಲಿ ಸುಗಮ ಸಂಚಾರಕ್ಕಾಗಿ ನೂತನವಾಗಿ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಸಿಮೆಂಟ್ ಕಾಂಕ್ರೀಟ್ ರಸ್ತೆ: ನೇತಾಜಿ ನಗರದ 3, 4, 5 ಮತ್ತು 6ನೇ ಅಡ್ಡರಸ್ತೆಗಳಿಗೆ ದೀರ್ಘಕಾಲ ಬಾಳಿಕೆ ಬರುವಂತೆ 230 ಎಂ.ಎಂ ವ್ಯಾಸದ ನೂತನ ಸಿಮೆಂಟ್ ಕಾಂಕ್ರೀಟ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.
ಅಕ್ಕಿಪೇಟೆ-ನಾಗಮ್ಮನಗರ ಅಭಿವೃದ್ಧಿ: ಈ ಭಾಗದ ನಾಗರಿಕರ ಬಹುದಿನಗಳ ಬೇಡಿಕೆಯಂತೆ ರಸ್ತೆಗಳ ಸಮಗ್ರ ಸುಧಾರಣೆಗೆ ಚಾಲನೆ ನೀಡಲಾಗಿದೆ.
“ನಮ್ಮ ಕ್ಷೇತ್ರದ ಪ್ರತಿ ಗಲ್ಲಿಯೂ ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಗುರಿ. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲದೆ, ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.” – ದಿನೇಶ್ ಗುಂಡೂರಾವ್
ಸ್ಥಳೀಯರ ಪಾಲ್ಗೊಳ್ಳುವಿಕೆ: ಈ ಸಂದರ್ಭದಲ್ಲಿ ಕ್ಷೇತ್ರದ ನಿವಾಸಿಗಳು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವರಿಗೆ ನಾಗಮ್ಮನಗರ ಮತ್ತು ನೇತಾಜಿನಗರದ ನಿವಾಸಿಗಳು ಕೃತಜ್ಞತೆ ಸಲ್ಲಿಸಿದರು.






